ಸಭಾನಾಯಕಿ ಡಾ. ಜಯಮಾಲಾ, ಆಡಳಿತ ಪಕ್ಷದ ಸದಸ್ಯರಾದ ವಿ.ಎಸ್. ಉಗ್ರಪ್ಪ, ಜಯಮ್ಮ ಬಾಲರಾಜು, ವೀಣಾ ಅಚ್ಚಯ್ಯ ಅವರು ಮಂಜುನಾಥ್ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಯಾರು ಯಾರನ್ನು ಕೇಳಿ ಗರ್ಭಿಣಿಯಾಗುವುದಿಲ್ಲ. ನಿಮ್ಮನ್ನು ಹೆರುವಾಗ ನಿಮ್ಮ ತಾಯಿ ಯಾರನ್ನಾದರೂ ಕೇಳಿ ಗರ್ಭಿಣಿಯಾಗಿದ್ದರೆ ಎಂದು ಪ್ರಶ್ನಿಸಿದರು. ಇದರಿಂದ ಮತ್ತೆ ಆಡಳಿತ ಹಾಗೂ ಪ್ರತಿಪಕ್ಷದ ಸದಸ್ಯರ ನಡುವೆ ಗದ್ದಲ, ಕೋಲಾಹಲಕ್ಕೆ ಕಾರಣವಾಯಿತು.