ಈ ಕುರಿತು ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ, ನಾನು ಕೊಟ್ಟಿರುವ ಭರವಸೆಗಳನ್ನು ಈಡೇರಿಸಲು ಎದುರಾಗುವ ಸವಾಲುಗಳನ್ನು ನೋಡಿ ನನಗೆ ಕಣ್ಣೀರು ಬಂತು. ಕಾಂಗ್ರೆಸ್ ನಿಂದ ನನಗೆ ತೊಂದರೆಯಾಗುತ್ತಿದೆ ಎಂದು ನಾನು ಎಂದಿಗೂ ಹೇಳಿಲ್ಲ. ನನ್ನ ಹೇಳಿಕೆಗಳನ್ನು ತಿರುಚಲಾಗಿದೆ. ತಪ್ಪಾಗಿ ಅರ್ಥೈಸಲಾಗಿದೆ. ಕಾಂಗ್ರೆಸ್ ನಾಯಕರಿಂದ ನನಗೆ ಯಾವುದೇ ರೀತಿಯ ತೊಂದರೆಯಾಗುತ್ತಿಲ್ಲ ಎಂದು ಹೇಳಿದ್ದಾರೆ.