ಅಲ್ಲದೆ, ಸರಿಯಾದ ಸಂಬಳ ಸಿಗದೆ ಪೌರಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿದಿನ ರೈತರು ಸಹ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು, ರಾಜ್ಯದಲ್ಲಿ ಮಳೆ ಹೆಚ್ಚಾದ ಕಾರಣ ಪ್ರವಾಹ ಉಂಟಾಗಿದ್ದು, ರೈತರ ಹಾಗೂ ಜನರ ಜೀವನವನ್ನು ಹಾಳು ಮಾಡುತ್ತಿದೆ. ಹೀಗಾಗಿ, ರಾಜ್ಯ ಸರ್ಕಾರ ತನ್ನ ಬೊಕ್ಕಸದಲ್ಲಿರುವ ಹಾಗೂ ಜನರ ತೆರಿಗೆ ಹಣದ ಪ್ರತಿ ಪೈಸೆಯನ್ನೂ ಜನರ ಕಷ್ಟವನ್ನು ಪರಿಹರಿಸಲು ವಿನಿಯೋಗಿಸಿ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಟ್ವೀಟ್ ಮಾಡಿದ್ದಾರೆ.