ಇಂದು ಬಳ್ಳಾರಿಯಲ್ಲಿ ನಡೆದ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸೋಮಶೇಖರ ರೆಡ್ಡಿ ಅವರು, ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಜನರ್ಧನ ರೆಡ್ಡಿಯನ್ನು ಬಿಜೆಪಿ ನಾಯಕರು ಕಡೆಗಣಿಸಿದರು. ವಿನಾ ಕಾರಣ ಅವರನ್ನು ಪಕ್ಷದ ಚುನಾವಣಾ ಪ್ರಚಾರದಿಂದ ದೂರವಿಟ್ಟರು. ಅವರನ್ನು ಸರಿಯಾಗಿ ಬಳಸಿಕೊಂಡಿದ್ದರೆ ಖಂಡಿತವಾಗಿ ಬಿಜೆಪಿ ಅಧಿಕಾರಕ್ಕೆ ಬರುತಿತ್ತು ಎಂದು ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.