ಕೇಂದ್ರದಲ್ಲಿರುವ ಬಿಡೆಪಿ ನಾಯಕರು ಕಳೆದ 15 ದಿನಗಳಿಂದಲೂ ನಮಗೆ ಬೆದರಿಕೆಗಳನ್ನು ಹಾಕುತ್ತಿದ್ದಾರೆ. ಇಡಿ, ಐಟಿ ಹಾಗೂ ಸಿಬಿಐ ಸಂಸ್ಥೆಗಳು ದುರ್ಬಳಕೆಯಾಗುತ್ತಿರುವುದಕ್ಕೆ ಅಮಿತ್ ಶಾ ಹಾಗೂ ನರೇಂದ್ರ ಮೋದಿಯವರೇ ಜವಾಬ್ದರಾರರಾಗಿದ್ದಾರೆ. ನಮ್ಮ ಕುಟುಂಬವನ್ನು ಗುರಿ ಮಾಡಲಾಗುತ್ತಿದೆ. ಬಿಜೆಪಿ ಪಕ್ಷದಲ್ಲಿರುವ ನಮ್ಮ ಸ್ನೇಹಿತರಿಗೆ ಹೇಳಲು ಇಚ್ಛಿಸುತ್ತೇವೆ, ಡಿಕೆ. ಶಿವಕುಮಾರ್ ಹಾಗೂ ಡಿಕೆ.ಸುರೇಶ್ ಇಂತಹ ಯಾವುದೇ ತಂತ್ರಗಳಿಗೂ ಹೆದರುವುದಿಲ್ಲ ಎಂದು ತಿಳಿಸಿದ್ದಾರೆ.