ನಗರದಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿರುವುದಕ್ಕೆ ಕಾಂಗ್ರೆಸ್ ಕಾರಣ ಎಂದು ಬಿಜೆಪಿ ವಕ್ತಾರ ಅಶ್ವತ್ಥ್ ನಾರಾಯಣ ಆರೋಪಿಸಿದ್ದಾರೆ, ಕೆಲ ಕ್ಷೇತ್ರಗಳಲ್ಲಿ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ತಂತ್ರದಿಂದಾಗಿ ಬಿಜೆಪಿ ಮತದಾರರ ಹೆಸರುಗಳು ನಾಪತ್ತೆಯಾಗಿವೆ, ಅಧಿಕಾರಕ್ಕೆ ಬರಬೇಕೆಂಬ ದುರುದ್ದೇಶದಿಂದ ಕಾಂಗ್ರೆಸ್ ಹೀಗೆ ಮಾಡಿದೆ ಎಂದು ದೂರಿದ್ದಾರೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಮಿಷನ್-25 ಬಗ್ಗೆ ಪ್ರತಿಕ್ರಿಯಿಸಿದ ಅವರು ಕನಿಷ್ಠ ಪಕ್ಷ 20 ಸ್ಥಾನ ಗಳಿಸಲು ನಾವು ಪ್ರಯತ್ನಿಸಿದ್ದೆವು, ಆದರೆ ಅದು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ.