ಜೂ.1 ರಂದು ರಾಜಭವನಕ್ಕೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ರಾಜ್ಯಪಾಲರೊಂದಿಗೆ ಚರ್ಚೆ ನಡೆಸಿ ಸಚಿವರ ಪದಗ್ರಹಣಕ್ಕೆ ದಿನಾಂಕ ನಿಗದಿಪಡಿಸಿದ್ದಾರೆ. " ಜೂ.03 ರಂದು ಸಚಿವರ ಪದಗ್ರಹಣ ಕಾರ್ಯಕ್ರಮ ನಿಗದಿ ಮಾಡಬೇಕೆಂದುಕೊಂಡಿದ್ದೆವು, ಆದರೆ ಅದೇ ದಿನ ರಾಜ್ಯಪಾಲರಿಗೆ ಪೂರ್ವನಿಗದಿತ ಕಾರ್ಯಕ್ರಮಗಳು ಇರುವುದರಿಂದ ರಾಜ್ಯಪಾಲರ ಸಮಯ ಕೇಳಲಿದ್ದೇವೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.