ಬಿಜೆಪಿಯ ಕುದುರೆ ವ್ಯಾಪಾರದಿಂದ ಕಾಂಗ್ರೆಸ್ ಶಾಸಕರನ್ನು ರಕ್ಷಿಸಲು ಡಿ,ಕೆ ಶಿವಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು. ಹೀಗಿದ್ದರು ಸಮ್ಮಿಶ್ರ ಸರ್ಕಾರದಲ್ಲಿ ಅವರಿಗೆ ಇಂಧನ ಖಾತೆ ನೀಡಲು ನಿರಾಕರಿಸಲಾಗಿದೆ. ಇಂಧನ ಖಾತೆ ಮರಳಿ ಪಡೆಯಲು ಶಿವಕುಮಾರ್ ಪಟ್ಟ ಪ್ರಯತ್ನ ವ್ಯರ್ಥವಾಗಿದೆ. ಇಂಧನ ಖಾತೆ ಜೆಡಿಎಸ್ ಪಾಲಾಗಿದ್ದು, ಮುಖ್ಯಮಂತ್ರಿ ಕುಮಾರ ಸ್ವಾಮಿ ಸಹೋದರ ಎಚ್.ಡಿ ರೇವಣ್ಣ ಆ ಖಾತೆ ವಹಿಸಿಕೊಳ್ಳುವ ಸಾಧ್ಯತೆಯಿದೆ.