ಶುಕ್ರವಾರ ಬೆಂಗಳೂರಿನಲ್ಲಿ ದೇವೇಗೌಡ ಅವರನ್ನು ಭೇಟಿಯಾಗಿದ್ದ ವೈಎಸ್ ವಿ ದತ್ತಾ ಅವರು, ನಾನು ರಾಮಕೃಷ್ಣ ಹೆಗಡೆ ಕಾಲದಿಂದಲೂ ನಿಮ್ಮ ಜತೆಗೆ ಇದ್ದವನು, ಅಂದು ನಾನು ಹೆಗಡೆಯವರ ಜತೆ ಹೋಗದೆ ನಿಮ್ಮ ಬೆನ್ನಿಗೆ ನಿಂತಿದ್ದೆ. ಆದರೆ ಈಗ ನನ್ನನ್ನೇ ಪಕ್ಷದಲ್ಲಿ ಮೂಲೆಗುಂಪು ಮಾಡಿದ್ದೀರಿ. ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಸೋಲಿಗೆ ಕಾರಣರಾದ ಧರ್ಮೇಗೌಡರಿಗೆ ವಿಧಾನಪರಿಷತ್ ಟಿಕೆಟ್ ಕೊಟ್ಟಿದ್ದೀರಿ. ಇದು ನೀವು ಮತ್ತು ರೇವಣ್ಣ ಮಾಡಿರುವ ಉಪಕಾರ. ಇನ್ಮೇಲೆ ನೀವು ಬೇಡ, ನಿಮ್ಮ ಪಕ್ಷವೂ ಬೇಡ. ನಿಮ್ಮನ್ನು ನಂಬಿ ಬಂದಿದ್ದಕ್ಕೆ ನನಗೆ ನೀವು ಮಾಡಿದ ಉಪಕಾರ ಇದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.