ಸದ್ಯ ಸಮ್ಮಿಶ್ರ ಸರ್ಕಾರ ಸುಲಲಿತವಾಗಿ ನಡೆಯುತ್ತಿದ್ದು, ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿದ್ದವನರು ತಮಗೆ ಈ ಬಾರಿ ತಮಗೆ ಸಂಪುಟದಲ್ಲಿ ಸ್ಥಾನ ಸಿಗುವುದೆಂಬ ಭರವಸೆಯಲ್ಲಿದ್ದಾರೆ. ಹಿಂದಿನ ಸರ್ಕಾರಗ ಅವಧಿಯಲ್ಲಿ ಜಾರಿಗೆ ತಂದಿದ್ದ ಯೋಜನೆಗಳನ್ನು ಅನುಷ್ಛಾನಗೊಳಿಸಲು ತಮಗೆ ಅಧಿಕಾರ ನೀಡಬೇಕೆಂದು ಮಾಜಿ ಸಚಿವರುಗಳು ಮನವಿ ಮಾಡಿದ್ದಾರೆ, ಇಲ್ಲದಿದ್ದರೇ ದೇವೇಗೌಡ ಮತ್ತು ಕುಮಾರಸ್ವಾಮಿ ಎಲ್ಲಾ ಕ್ರೆಡಿಟ್ ತೆಗೆದುಕೊಳ್ಳುತ್ತಾರೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೊಂದರೆಗೆ ಸಿಲುಕುತ್ತಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡು ಹೇಳಿದ್ದಾರೆ.