ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಸಂಬಂಧ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ನಮ್ಮ ಶಾಸಕರ ಜೊತೆ ಸಭೆ ನಡೆಸಿದ್ದೆವು, ಉತ್ತಮ ಆಡಳಿತ, ಪಕ್ಷದ ಮುಂದಿನ ಭವಿಷ್ಯ ಸೇರಿದಂತೆ ಮತ್ತಿತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ನಮ್ಮ ಶಾಸಕರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ನಮ್ಮ ಮುಂದಿನ ಸಂಪುಟಕ್ಕೆ ಸಚಿವರನ್ನು ಆಯ್ಕೆ ಮಾಡಲು ಪಕ್ಷದ ರಾಜ್ಯಾಧ್ಯಕ್ಷರಿಗೆ ಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ ಎಂದು ಕುಮಾರ ಸ್ವಾಮಿ ತಿಳಿಸಿದ್ದಾರೆ.
ನೀರಾವರಿ, ಆರೋಗ್ಯ, ಕೃಷಿ ಹಾಗೂ ಗೃಹ ಖಾತೆ ಸೇರಿದಂತೆ 22 ಖಾತೆಗಳು ಕಾಂಗ್ರೆಸ್ ಪಾಲಾಗಿವೆ. ಹಣಕಾಸು, ಅಬಕಾರಿ, ಲೋಕೋಪಯೋಗಿ ಇಲಾಖೆ ಸೇರಿದಂತೆ 12 ಇಲಾಖೆಗಳು ಜೆಡಿಎಸ್ ಗೆ ಸಿಕ್ಕಿವೆ,
ಸಮ್ಮಿ ಶ್ರ ಸರ್ಕಾರ ಯಾವುದೇ ತೊಂದರೆಯಿಲ್ಲದಂತೆ ನಡೆದುಕೊಂಡು ಹೋಗಲು ಸಮನ್ವಯ ಸಮಿತಿ ರಚಿಸಲಾಗುವುದು ಎಂದು ಹೇಳಿದ್ದಾರೆ.