ಸಂಪುಟ ವಿಸ್ತರಣೆ ನಂತರ ಬುಧವಾರದಿಂದ ಭಿನ್ನಮತ ಮತ್ತಷ್ಟು ಹೆಚ್ಚಾಯಿತು, ಶುಕ್ರವಾರ ದೆಹಲಿಗೆ ಬರುವಂತೆ ಹೈಕಮಾಂಡ್ ಎಂಬಿ ಪಾಟೀಲ್ ಗೆ ಬುಲಾವ್ ನೀಡಿದೆ, ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆ ಆಗದಿರಲಿ ಎಂದು ಸಿಎಂ ಕುಮಾರ ಸ್ವಾಮಿ ಎಂಬಿ ಪಾಟೀಲ್ ನಿವಾಸಕ್ಕೆ ಆಗಮಿಸಿದ್ದರು. ಕುಮಾರ ಸ್ವಾಮಿ ಹಸ್ತಕ್ಷೇಪ, ಪ್ರಕರಣವನ್ನು ಸರಿಪಡಿಸುವಲ್ಲಿ ರಾಜ್ಯ ಕಾಂಗ್ರೆಸ್ ವಿಫಲವಾಗಿದೆ ಎಂದು ರಾಜಕೀಯ ತಜ್ಞರು ವಿಶ್ಲೇಷಿಸಿದ್ದಾರೆ.