ಜಯನಗರ ಕ್ಷೇತ್ರ ಕಾಂಗ್ರೆಸ್ ಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಸಚಿವ ಖಾತೆ ತಪ್ಪಿದ ನಂತರ ರಾಮಲಿಂಗಾರೆಡ್ಡಿ ತನ್ನ ಮಗಳನ್ನು ಗೆಲ್ಲಿಸಲು ಇನ್ನಿಲ್ಲದಂತಹ ಕಸರತ್ತು ನಡೆಸುತ್ತಿದ್ದಾರೆ. ಬಿಟಿಎಂ ಕ್ಷೇತ್ರದ ಚುನಾವಣೆಯಲ್ಲಿ ರಾಮಲಿಂಗಾರೆಡ್ಡಿ ಪ್ರಚಾರಕ್ಕೆ ಹೋಗಿರಲಿಲ್ಲ. ಆದರೆ, ಸೌಮ್ಯರೆಡ್ಡಿ ಪರವಾಗಿ ರೋಡ್ ಶೋ, ಸಭೆಗಳನ್ನು ನಡೆಸುತ್ತಿದ್ದಾರೆ. ಸೌಮ್ಯರೆಡ್ಡಿ ಗೆಲುವಿಗಾಗಿ ಸಾಕಷ್ಟು ಶ್ರಮಪಡುತ್ತಿದ್ದು, ಶೇ, 100 ರಷ್ಟು ಗೆಲ್ಲುವ ವಿಶ್ವಾಸವಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.