ಕೆಪಿಸಿಸಿ ಹುದ್ದೆಗೆ ಸಿದ್ದರಾಮಯ್ಯ ಅವರ ಹೆಸರನ್ನು ಕೆಲ ಬೆಂಬಲಿಗರು ತೇಲಿ ಬಿಟ್ಟಿದ್ದಾರೆ. ಹೀಗಾಗಿ ಸೋಮವಾರದಿಂದ ಕೆಪಿಸಿಸಿ ಅಧ್ಯಕ್ಷ ಆಯ್ಕೆ ವಿಚಾರ ಮತ್ತಷ್ಟು ಕುತೂಹಲ ಮೂಡಿಸಿದೆ, ಹಿಂದುಳಿದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯ. ಪರ ಹಲವರು ಒಲವು ತೋರಿದ್ದಾರೆ, ಒಂದು ವೇಳೆ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷರಾದರೇ ನಮಗೆ ತುಂಬಾ ಸಂತೋಷವಾಗುತ್ತದೆ, ಸಿದ್ದರಾಮಯ್ಯ ಕೇವಲ ಒಂದೇ ಒಂದು ಸಮುದಾಯದ ನಾಯಕರಲ್ಲ, ಇಡೀ ರಾಜ್ಯಕ್ಕೆ ಅವರು ನಾಯಕ ಎಂದು ಶಾಸಕ ಭೈರತಿ ಸುರೇಶ್ ಹೇಳಿದ್ದಾರೆ.