ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸ್ಥಾನದ ಲಾಬಿ ಮುಂದುವರೆದಿರುವಂತೆಯೇ ಇಂದು ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ರನ್ನು ಭೇಟಿ ಮಾಡಿದ ತನ್ವೀರ್ ಸೇಠ್ ಅವರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ 'ರಾಜ್ಯದಲ್ಲಿ ಮುಸ್ಲಿಂ ಸಮುದಾಯ ನಾಯಕತ್ವ ಮುಗಿಸುವ ಕೆಲಸ ನಡೆಯುತ್ತಿದ್ದು, ನಮ್ಮ ಸಮುದಾಯದ ಅರ್ಹರಲ್ಲದ ಶಾಸಕರಿಗೆ ಸಚಿವ ಸ್ಥಾನ ನೀಡಿದ್ದಾರೆ. ಯು.ಟಿ. ಖಾದರ್ ಮತ್ತು ಜಮೀರ್ ಅಹಮದ್ಗೆ ನಮ್ಮಸಮುದಾಯ ಪ್ರತಿನಿಧಿಸುವ ನಾಯಕತ್ವ ಗುಣ ಇಲ್ಲ. ಸಮುದಾಯ ನಾಯಕತ್ವ ವಹಿಸುವಷ್ಟು ಜಮೀರ್ ಮತ್ತು ಖಾದರ್ ಅರ್ಹರಲ್ಲ. ಜಮೀರ್ ನನ್ನ ಸೋಲಿಗೆ ಪ್ರಯತ್ನ ಮಾಡಿದವರು. ಬೇರೆ ಕಡೆಯಿಂದ ಬಂದ ಅವರಿಗೆ ಮಣೆ ಹಾಕಿದ್ದಾರೆ. ಈ ಬಗ್ಗೆ ಪಕ್ಷದ ವರಿಷ್ಠರಿಗೆ ಮಾಹಿತಿ ನೀಡಿದ್ದೇನೆ ಎಂದು ತನ್ವೀರ್ ಸೇಠ್ ಹೇಳಿದರು.