ಕುಮಾರ ಸ್ವಾಮಿ ಸಿಎಂ ಆಗಿದ್ದಾರೆ, ಪಕ್ಷ ಅಧಿಕಾರಕ್ಕೆ ಬಂದಿದೆ, ಆಧರೆ ನೀಡಿದ್ದ ಭರವಸೆ ಮಾತ್ರ ಈಡೇರಿಲ್ಲ, ಈ ವರ್ಷದ ಫೆಬ್ರವರಿಯಲ್ಲಿ ಟಾನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಮಾರ ಸ್ವಾಮಿ ಆಟೋರಿಕ್ಷಾ ಚಾಲಕರು ಮತ್ತು ಕ್ಯಾಬ್ ಚಾಲಕರ ಜೊತೆ ಸಂವಾದ ನಡೆಸಿದ್ದರು. ಈ ವೇಳೆ ಜೆಡಿಎಸ್ ಬೆಂಬಲಿಸುವಂತೆ ಮನವಿ ಮಾಡಿದ್ದರು. ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನಿಮ್ಮಲ್ಲಿ ಒಬ್ಬರನ್ನು ವಿಧಾನಸೌಧ ಪ್ರವೇಶಕ್ಕೆ ಅವಕಾಶ ನೀಡುವುದಾಗಿ ಹೇಳಿದ್ದರು. ಮೇ 23 ರಂದು ಕುಮಾರ ಸ್ವಾಮಿ ಸಿಎಂ ಪ್ರಮಾಣ ವಚನ ಸ್ವೀಕರಿಸಿದ್ದಾರೆ, ಆದರೆ ತಾವು ನೀಡಿದ್ದ ಭರವಸೆ ಮಾತ್ರ ಇನ್ನೂ ಈಡೇರಿಲ್ಲ.