ಜಯನಗರದಲ್ಲಿ ಸೋಲಿಗೆ ಸ್ಥಳೀಯ ಕಾರ್ಪೋರೇಟರ್ ಹೊಣೆ: ಬಿಜೆಪಿಯಿಂದ ಶೋಕಾಸ್ ನೋಟಿಸ್

ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 3 ಸಾವಿರ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೋತಿರುವುದಕ್ಕೆ ಬಿಜೆಪಿ ನಾಯಕರು ...
ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್
ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್
ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ  ಬಿಜೆಪಿ ಅಭ್ಯರ್ಥಿ 3 ಸಾವಿರ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೋತಿರುವುದಕ್ಕೆ ಬಿಜೆಪಿ ನಾಯಕರು ಆಕ್ರೋಶಗೊಂಡಿದ್ದಾರೆ.
ಸ್ಥಳೀಯ ಬಿಜೆಪಿ ಕಾರ್ಪೋರೇಟರ್ ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡಿರುವುದರಿಂದ ಪ್ರಹ್ಲಾದ್ ಬಾಬು ಸೋತಿದ್ದಾರೆ ಎಂದು ಕಿಡಿಕಾರಿದೆ. ಈ ಸಂಬಂಧ ಬೆಂಗಳೂರು ನಗರ ಘಟಕ ಅಧ್ಯಕ್ಷ ಪಿ.ಎನ್ ಸದಾಶಿವ ಶುಕ್ರವಾರ ಬೈರಸಂದ್ರ ಕಾರ್ಪೋರೇಟರ್ ಎನ್ ನಾಗರಾಜ್ ಅವರಿಗೆ ಶೋಕಾಸ್ ನೋಟೀಸ್ ನೀಡಿದ್ದಾರೆ.
7 ದಿನಗಳಲ್ಲಿ ವಿವರಣೆ ನೀಡುವಂತೆ ನೋಟೀಸ್ ನಲ್ಲಿ ತಿಳಿಸಿದ್ದು, ಚುನಾವಣೆ ವೇಳೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದವರ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ಪ್ರಶ್ನಿಸಿದ್ದಾರೆ,
ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್  ಪರ ಪ್ರಚಾರ ಮಾಡದೇ ಕಾಂಗ್ರೆಸ್ ನ ಸೌಮ್ಯಾ ರೆಡ್ಡಿ ಪರ ಕೆಲಸ ಮಾಡಿದ್ದಾರೆಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ 2,889 ಮತಗಳ ಅಂತರದಿಂದ ಜಯ ಗಳಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com