ಸಿದ್ದರಾಮಯ್ಯ ಜತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಿಎಂ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ ...
ಎಚ್ ಡಿ ಕುಮಾರಸ್ವಾಮಿ - ಸಿದ್ದರಾಮಯ್ಯ
ಎಚ್ ಡಿ ಕುಮಾರಸ್ವಾಮಿ - ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದರು.
ಸಿದ್ದರಾಮಯ್ಯ ಅವರು ರಾಜಕೀಯದ ಬಗ್ಗೆ ಚರ್ಚೆ ಮಾಡುವುದು ಮತ್ತು ಕುಮಾರಸ್ವಾಮಿ ಅವರು ಬಜೆಟ್ ಮಂಡಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಸಿಎಂ ಕುಮಾರಸ್ವಾಮಿ ನಿನ್ನೆ ಮಾಜಿ ಸಿಎಂ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು.
ನಾನು ಬಜೆಟ್ ಮಂಡಿಸುತ್ತೇನೋ ಇಲ್ಲವೋ ಗೊತ್ತಿಲ್ಲ. ಆದರೆ ಬಜೆಟ್ ಮಂಡನೆ ವಿಚಾರದಲ್ಲಿ ನಾನು ಯಾರ ಹಂಗಿನಲ್ಲೂ ಇಲ್ಲ. ಬಜೆಟ್ ಮಂಡನೆ ಬೇಕೆ ಬೇಡವೇ ಎಂಬ ಕುರಿತು ಚರ್ಚೆಯಾಗುತ್ತಿದೆ. ಕೆಲವರು ಲೋಕಸಭೆ ಚುನಾವಣೆ ಬಳಿಕ ಬಜೆಟ್ ಮಂಡನೆಗೆ ಸಲಹೆ ನೀಡಿದ್ದಾರೆ. ಆದರೆ ಆ ಬಳಿಕ ನಮ್ಮ ಸರಕಾರ ಇರುತ್ತದೆಯೇ ಇಲ್ಲವೇ ಎಂಬುದೇ ಗೊತ್ತಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಿಎಂಗೆ ಟಾಂಗ್ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com