ರಾಜ್ಯ ಕೆಲ ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಬೇಕು. ಹಳ್ಳಿ ಕಡೆ ದನಗಳು ಮೇಯಲು ಹೋಗುತ್ತವೆ. ಕೆಲವು ಸರಿಯಾದ ದಾರಿಯಲ್ಲಿ ಸಾಗಿದರೆ, ಇನ್ನು ಕೆಲ ದನಗಳು ಅಡ್ಡಾದಿಡ್ಡಿ ಮಾರ್ಗ ಅನುಸರಿಸುತ್ತವೆ. ಅದೇ ರೀತಿ ಪಕ್ಷದಲ್ಲಿಯೂ ಇತಿ ಮಿತಿ ಮೀರಿ ಬಾಯಿಗೆ ಬಂದಂತೆ ಪ್ರತಿಕ್ರಿಯೆ ನೀಡುತ್ತಿದ್ದಾರೆಂದು ಯಾರ ಹೆಸರು ಪ್ರಸ್ತಾಪ ಮಾಡದೆಯೇ ಖಾರವಾಗಿ ಹೇಳಿದ್ದಾರೆ.