ಸಿದ್ದು ನೇತೃತ್ವದಲ್ಲಿ ನಾಳೆ ಸಮನ್ವಯ ಸಮಿತಿ ಸಭೆ

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ 2ನೇ ಸಮನ್ವಯ ಸಮಿತಿ ಸಭೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಭಾನುವಾ ನಡೆಯಲಿದೆ ಎಂದು ತಿಳಿದುಬಂದಿದೆ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು; ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ 2ನೇ ಸಮನ್ವಯ ಸಮಿತಿ ಸಭೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಭಾನುವಾ ನಡೆಯಲಿದೆ ಎಂದು ತಿಳಿದುಬಂದಿದೆ. 
ಬಜೆಟ್, ಸಾಲಮನ್ನಾ, ಜಿಲ್ಲಾ ಉಸ್ತುವಾರಿ ಸಚಿವರ ನೇಮಕ, ನಿಗಮ ಮಂಡಳಿಗಳ ಪಾಲು ಸೇರಿದಂತೆ ಉಭ ಪಕ್ಷಗಳ ನಡುವೆ ಉಂಟಾಗಿದ್ದ ಗೊಂದಲ ಹಾಗೂ ತಿಕ್ಕಾಟಕ್ಕೆ ಕಾರಣವಾಗಿರುವ ಎಲ್ಲಾ ಅಂಶಗಳ ಕುರಿತು ಚರ್ಚೆ ನಡೆಯಲಿದೆ ಎಂದು ವರದಿಗಳು ತಿಳಿಸಿವೆ. 
ಇದಲ್ಲದೆ ಜು.5ಕ್ಕೆ ಬಜೆಟ್ ಮಂಡನೆಯಾಗಲಿದ್ದು, ಈ ಹಿನ್ನಲೆಯಲ್ಲಿ ಎರಡೂ ಪಕ್ಷಗಳಲ್ಲಿನ ಯಾವ ಯಾವ ಸಾಮಾನ್ಯ ಕಾರ್ಯಕ್ರಮಗಳನ್ನು ಮುಂಗಡಪತ್ರದಲ್ಲಿ ಅಳವಡಿಸಬೇಕು ಎಂಬ ಬಗ್ಗೆ ವೀರಪ್ಪ ಮೊಯ್ಲಿ ನೇತೃತ್ವದ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ (ಸಿಎಂಪಿ) ಕರಡು ಸಮಿತಿ ನೀಡಿರುವ ವರದಿ ಬಗ್ಗೆಯೂ ಚರ್ಚೆ ನಡೆಸುವ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿದೆ ಎನ್ನಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com