ಮಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಾ.20ರಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮಂಗಳೂರು ಭಾಗದ ಕಾಂಗ್ರೆಸ್ ಮುಖಂಡ ಐವನ್ ಡಿ'ಸೋಜಾ ಹೇಳಿದ್ದಾರೆ.
ಕರಾವಳಿ ಜಿಲ್ಲೆಯಲ್ಲಿ ಹಲವಾರು ಸಾರ್ವಜನಿಕ ಸಭೆಗಳಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದು ಅವರ ಜಿಲ್ಲಾ ಪ್ರವಾಸದ ಸಂಪೂರ್ಣ ವಿವರಗಳನ್ನು ಮುಂದಿನ ದಿನಗಳಲ್ಲಿ ಒದಗಿಸಲಿದ್ದೇವೆ ಎಂದು ಡಿ'ಸೋಜಾ ತಿಳಿಸಿದರು.