ಕೆಪಿಜೆಪಿ ಪಕ್ಷದ ಸಂಸ್ಥಾಪಕ ಮಹೇಶ್ ಗೌಡ ಅವರೊಂದಿಗಿನ ವಿರಸಕ್ಕೆ ಫುಲ್ ಸ್ಟಾಪ್ ಹಾಕಿರುವ ನಟ ಉಪೇಂದ್ರ, ತಾವು ಕೆಪಿಜೆಪಿ ಪಕ್ಷದಿಂದಲೇ ಹೊರಬರುತ್ತಿರುವುದಾಗಿ ಹೇಳಿದರು. ಅಂತೆಯೇ ತತ್ ಕ್ಷಣದಿಂದ ತಮಗೂ ಕೆಪಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು. ಅವರಿಗೆ ರಾಜಕೀಯ ಬೇಕು. ಆದರೆ ನಮಗೆ ಪ್ರಜಾಕೀಯವೇ ಬೇಕು. ನಾವೆಲ್ಲರೂ ರಾಜಕೀಯ ಒಪ್ಪಿ ಬಂದವರಲ್ಲ. ಪ್ರಜಾಕೀಯವನ್ನು ಒಪ್ಪಿ ಅದರಲ್ಲೇ ಹೋರಾಡಲು ಬಂದವರು ನಾವು. ಪ್ರಜಾಕೀಯವನ್ನು ಒಪ್ಪಿ ಅಪ್ಪಿಕೊಂಡವರು ನಾವು. ಹೀಗಾಗಿ ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಮರಳುವುದಿಲ್ಲ. ಹೀಗಾಗಿಯೇ ಕೆಪಿಜೆಪಿಗೆ ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಉಪೇಂದ್ರ ಘೋಷಣೆ ಮಾಡಿದರು.