ಹಾಸನದಲ್ಲಿ ವಿಕಾಸ ಪರ್ವ ರ್ಯಾಲಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೇ ಅಷ್ಟು ದೊಡ್ಡ ಪ್ರಮಾಣದ ಸಾಲವನ್ನು ಮನ್ನಾ ಮಾಡುವುದಾಗಿ ಹೇಳಿದ್ದಾರೆ. 50 ಸಾವಿರ ಕೋಟಿ ರು ಹಣ ಕಡಿಮೆ ಮೊತ್ತವಲ್ಲ, ರಾಜ್ಯದ ಖಜಾನೆಗೆ ಭಾರವಾಗದಂತೆ ಸರಿದೂಗಿಸುವುದನ್ನು ನನ್ನ ತಂದೆ ನನಗೆ ಕಲಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.