ಜೆಡಿಎಸ್ ಅಧಿಕಾರಕ್ಕೆ ಬಂದರೆ 50 ಸಾವಿರ ಕೋಟಿ ಕೃಷಿ ಸಾಲಮನ್ನಾ: ಕುಮಾರ ಸ್ವಾಮಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ 50 ಸಾವಿರ ಕೋಟಿ ರು. ಕೃಷಿ ಸಾಲಮನ್ನಾ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ...
ಕುಮಾರಸ್ವಾಮಿ
ಕುಮಾರಸ್ವಾಮಿ
Updated on
ಹಾಸನ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ  50 ಸಾವಿರ ಕೋಟಿ  ರು. ಕೃಷಿ ಸಾಲಮನ್ನಾ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಹಾಸನದಲ್ಲಿ ವಿಕಾಸ ಪರ್ವ ರ್ಯಾಲಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೇ ಅಷ್ಟು ದೊಡ್ಡ ಪ್ರಮಾಣದ ಸಾಲವನ್ನು ಮನ್ನಾ ಮಾಡುವುದಾಗಿ ಹೇಳಿದ್ದಾರೆ. 50 ಸಾವಿರ ಕೋಟಿ ರು ಹಣ ಕಡಿಮೆ ಮೊತ್ತವಲ್ಲ,  ರಾಜ್ಯದ ಖಜಾನೆಗೆ ಭಾರವಾಗದಂತೆ ಸರಿದೂಗಿಸುವುದನ್ನು ನನ್ನ ತಂದೆ ನನಗೆ ಕಲಿಸಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ಪ್ರಸ್ತುತ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ 1.35 ರು ಕೋಟಿ ಸಾಲ ತೆಗೆದುಕೊಂಡಿದ್ದಾರೆ, ರೈತರ ಸಾಲಮನ್ನಾ ಮಾಡಲು  ನಾನು ಮತ್ತೆ ಸಾಲ ಪಡೆಯುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com