ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಹಾಗೂ ರಾಜ್ಯಕ್ಕೆ ಪ್ರತ್ಯೇಕ ಧ್ವಜಕ್ಕಾಗಿ ಪ್ರಯತ್ನಗಳನ್ನು ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉದ್ದೇಶವಾದರೂ ಏನು? ರಾಜ್ಯ ಜನತೆಯೇ ಪ್ರತ್ಯೇಕ ಧ್ವಜ ಬೇಕೆಂದು ಆಗ್ರಹಿಸಿದರೆ, ಇದರೆ, ನಾನೇನೂ ಪ್ರತಿಕ್ರಿಯೆಗಳನ್ನು ನೀಡುವುದಿಲ್ಲ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆ ಹತ್ತಿರಬರುವುದಕ್ಕೂ ಮುನ್ನ ಈ ವಿಚಾರಗಳ ಬಗ್ಗೆ ದನಿ ಎತ್ತಿರಲಿಲ್ಲ. ಕಳೆದ ನಾಲ್ಕೂವರೆ ವರ್ಷಗಳಲ್ಲಿ ಈ ವಿಚಾರಗಳ ಬಗ್ಗೆ ಏಕೆ ಸಿದ್ದರಾಮಯ್ಯ ಅವರು ಮಾತನಾಡಲಿಲ್ಲ. ಇದು ಅವರ ಉದ್ದೇಶವನ್ನು ತಿಳಿಸುತ್ತದೆ ಎಂದು ತಿಳಿಸಿದ್ದಾರೆ.