ಸಚಿವರು, ಶಾಸಕರು ಪಕ್ಷದ ಕೆಲಸಕ್ಕೆ ಸಹಕರಿಸುತ್ತಿಲ್ಲವೆಂಬ ಕೆಲವರ ಆರೋಪಕ್ಕೆ ಪ್ರತಿಕ್ರಿಯಿಸಿದ ವೇಣುಗೋಪಾಲ್, ''ವಾರದೊಳಗೆ ಸಚಿವರು, ಶಾಸಕರನ್ನು ಕರೆಸಿ ಮತ್ತೊಂದು ಸಭೆ ನಡೆಸಲಾಗುವುದು. ಪಕ್ಷ ಯಾರ ಮನೆಯ ಆಸ್ತಿಯೂ ಅಲ್ಲ. ಪಕ್ಷದ ಹಿತಕ್ಕೆ ಎಲ್ಲರೂ ಕೆಲಸ ಮಾಡಬೇಕೆಂದು ಅವರಿಗೆ ಮನದಟ್ಟು ಮಾಡಲಾಗುವುದು,'' ಎಂಬ ಭರವಸೆ ನೀಡಿದರು ಎನ್ನಲಾಗಿದೆ.