ವಿಧಾನಸೌಧದಲ್ಲಿಂದು ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ಬಿಜೆಪಿ ಮೊದಲಿನಿಂದಲೂ ಗೃಹ ಇಲಾಖೆಯಲ್ಲಿ ಕೆಂಪಯ್ಯನವರ ಹಸ್ತಕ್ಷೇಪ ಇದೆ ಎಂದು ಹೇಳುತ್ತಲೆ ಬಂದಿತ್ತು. ಪ್ರಾಮಾಣಿಕ ಅಧಿಕಾರಿಗಳಿಗೆ ಈ ಸರ್ಕಾರದಲ್ಲಿ ಬೆಲೆ ಇಲ್ಲ ಎಂಬುದನ್ನು ಹಲವು ಬಾರಿ ಹೇಳಿದ್ದೇವು. ಈಗ ಅದು ಸಾಕ್ಷಿ ಸಮೇತ ಬಯಲಾಗಿದೆ. ಐಪಿಎಸ್ ಅಧಿಕಾರಿ ಆರ್.ಪಿ. ಶರ್ಮಾ, ತಮ್ಮ ಪತ್ರದಲ್ಲಿ ರಾಜಕೀಯ ಹಸ್ತಕ್ಷೇಪದಿಂದ ಅಧಿಕಾರಿಗಳು ಮುಕ್ತವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಈ ಸರ್ಕಾರದಲ್ಲಿ ಭ್ರಷ್ಟರಿಗೆ ಮಾತ್ರ ಮಣೆ ಎಂಬುದು ಈ ಪತ್ರದಿಂದ ಗೊತ್ತಾಗುತ್ತದೆ ಎಂದು ಹೇಳಿದರು.