ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶೋಬಾ, ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಲ್ಲಿ ನಡೆದ ಹಗರಣವನ್ನು ಬಯಲಿಗೆ ಎಳೆದಿದ್ದ ರಶ್ಮಿ ಮೇಲೆ ಹಲ್ಲೆ ನಡೆದಿತ್ತು. ಆ ಬಳಿಕ ಅವರನ್ನು ಪಿಯು ಮಂಡಳಿಗೆ ವರ್ಗಾವಣೆ ಮಾಡಲಾಗಿತ್ತು. ಅದಾದ ಬಳಿಕ ಅವರು ಎಲ್ಲಿ ಹೋದರು ಎಂಬುದು ಗೊತ್ತಿಲ್ಲ. ಐಎಎಸ್ ಅಧಿಕಾರಿಗಳ ಸಂಪರ್ಕದಲ್ಲೂ ಅವರು ಇಲ್ಲ, ನಾನು ಸೇರಿದಂತೆ ಹಲವರು ರಶ್ಮಿ ಅವರನ್ನು ಸಂಪರ್ಕಿಸಲು. ಪ್ರಯತ್ನಿಸಿದೆವು, ಆದರೆ ನಾವು ವಿಫಲರಾಗಿದ್ದೇವೆ. ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.