ಉತ್ತರ ಪ್ರದೇಶ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲೇ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಗೋರಖ್ ಪುರ ಮತ್ತು ಫುಲ್ಪುರ ಲೋಕಸಭಾ ಕ್ಷೇತ್ರಗಳ ಗೆಲುವಿಗಾಗಿ ನಾನು ಎಸ್ ಪಿ ಮತ್ತು ಬಿಎಸ್ ಪಿ ಪಕ್ಷವನ್ನು ಅಭಿನಂದಿಸುತ್ತೇನೆ. ಬಿಜೆಪಿಯೇತರ ಪಕ್ಷಗಳ ಏಕತೆಯಿಂದಾಗಿ ಇಂದು ಉಪ ಚುನಾವಣೆಯಲ್ಲಿ ಗೆಲುವು ದೊರೆತಿದೆ. ಈಗಲಾದರೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರು ಕರ್ನಾಟಕದ ಬಗ್ಗೆ ಉಪದೇಶ ನೀಡುವ ಬದಲು ತಮ್ಮ ರಾಜ್ಯದ ಅಭಿವೃದ್ಧಿಯತ್ತ ಗಮನಹರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.