ಕರ್ನಾಟಕಕ್ಕೆ ಪಾಠ ಮಾಡುವ ಬದಲು ರಾಜ್ಯದ ಅಭಿವೃದ್ಧಿಯತ್ತ ಗಮನಹರಿಸಿ: ಯೋಗಿ ಗೆ ಸಿಎಂ ಸಿದ್ದರಾಮಯ್ಯ ಟಾಂಗ್

ಕರ್ನಾಟಕಕ್ಕೆ ಪಾಠ ಮಾಡುವ ಬದಲು ನಿಮ್ಮ ರಾಜ್ಯದ ಅಭಿವೃದ್ಧಿ ವಿಚಾರದತ್ತ ಹೆಚ್ಚು ಗಮನಹರಿಸಿ ಎಂದು ಸಿಎಂ ಸಿದ್ದರಾಮಯ್ಯ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರ ಕಾಲೆಳೆದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಕರ್ನಾಟಕಕ್ಕೆ ಪಾಠ ಮಾಡುವ ಬದಲು ನಿಮ್ಮ ರಾಜ್ಯದ ಅಭಿವೃದ್ಧಿ ವಿಚಾರದತ್ತ ಹೆಚ್ಚು ಗಮನಹರಿಸಿ ಎಂದು ಸಿಎಂ ಸಿದ್ದರಾಮಯ್ಯ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರ ಕಾಲೆಳೆದಿದ್ದಾರೆ.
ಉತ್ತರ ಪ್ರದೇಶ ಉಪ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲಾಗಿರುವ ಹಿನ್ನಲೆಯಲ್ಲಿ ಟ್ವಿಟರ್ ನಲ್ಲಿ ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಮತ್ತು ಬಿಜೆಪಿ ಮುಖಂಡರಿಗೆ ಟಾಂಗ್ ನೀಡಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲೇ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಗೋರಖ್ ಪುರ ಮತ್ತು ಫುಲ್ಪುರ ಲೋಕಸಭಾ ಕ್ಷೇತ್ರಗಳ ಗೆಲುವಿಗಾಗಿ ನಾನು ಎಸ್ ಪಿ ಮತ್ತು ಬಿಎಸ್ ಪಿ ಪಕ್ಷವನ್ನು ಅಭಿನಂದಿಸುತ್ತೇನೆ. ಬಿಜೆಪಿಯೇತರ ಪಕ್ಷಗಳ ಏಕತೆಯಿಂದಾಗಿ ಇಂದು ಉಪ ಚುನಾವಣೆಯಲ್ಲಿ ಗೆಲುವು ದೊರೆತಿದೆ. ಈಗಲಾದರೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರು ಕರ್ನಾಟಕದ ಬಗ್ಗೆ ಉಪದೇಶ ನೀಡುವ ಬದಲು ತಮ್ಮ ರಾಜ್ಯದ ಅಭಿವೃದ್ಧಿಯತ್ತ ಗಮನಹರಿಸಲಿ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com