ಅರ್ಜಿಯಲ್ಲಿ ಕನ್ನಡದ 8 ದಿನ ಪತ್ರಿಕೆಗಳು, ನಾಲ್ಕು ಇಂಗ್ಲೀಷ್ ಪತ್ರಿಕೆಗಳು, 9 ರಾಜ್ಯ ಮತ್ತು ರಾಷ್ಟ್ರೀಯ ಸುದ್ದಿ ವಾಹಿನಗಿಳನ್ನು ಪ್ರತಿವಾದಿ ಮಾಡಲಾಗಿದೆ. ಹಾಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಚಿವರಾದ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ವಿಧಾನಪರಿಶಷತ್ ಸದಸ್ಯ ವಿ.ಎಸ್ ಉಗ್ರಪ್ಪ, ಮಾಜಿ ಸಚಿವ ಸಿ.ಎಂ. ಇಬ್ರಾಹಿಂ, ಕಾಂಗ್ರೆಸ್ ಪಕ್ಷದ ವಕ್ತಾರ ಬ್ರಿಜೇಶ್ ಕಾಳಪ್ಪ ಅವರನ್ನು ಪ್ರತಿವಾದಿ ಮಾಡಿದ್ದಾರೆ.