ಯಡಿಯೂರಪ್ಪ ಬ್ರೇಕಿಂಗ್ ನ್ಯೂಸ್ ಠುಸ್: ಕರ್ನಾಟಕ ಕಾಂಗ್ರೆಸ್ ವ್ಯಂಗ್ಯ

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಬ್ರೇಕಿಂಗ್ ನ್ಯೂಸ್ ಠುಸ್ ಆಗಿದೆ ಎಂದು ಕಾಂಗ್ರೆಸ್ ಪಕ್ಷ ವ್ಯಂಗ್ಯವಾಡಿದೆ.
ಟ್ವಿಟರ್ ಚಿತ್ರ
ಟ್ವಿಟರ್ ಚಿತ್ರ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಬ್ರೇಕಿಂಗ್ ನ್ಯೂಸ್ ಠುಸ್ ಆಗಿದೆ ಎಂದು ಕಾಂಗ್ರೆಸ್ ಪಕ್ಷ ವ್ಯಂಗ್ಯವಾಡಿದೆ.
ನಿನ್ನೆ 'ಬ್ರೇಕಿಂಗ್ ನ್ಯೂಸ್' ನೀಡುತ್ತೇನೆಂದು ಟ್ವೀಟ್ ಮಾಡಿ ಭಾರಿ ಕುತೂಹಲ ಮೂಡಿಸಿದ್ದ ಬಿಎಸ್‌ವೈ ಕೊನೆಗೆ ನಿರೀಕ್ಷೆಗಳನ್ನೆಲ್ಲಾ ಸುಳ್ಳುಮಾಡಿ ಬ್ರೇಕಿಂಗ್ ಏನನ್ನೂ ನೀಡದೇ ಕೇವಲ ಕಾಂಗ್ರೆಸ್ ವಿರುದ್ಧ ಭಾಷಣ ಮಾಡಿದ್ದ ವಿಡಿಯೋವನ್ನು ಅಪ್ಲೋಡ್ ಮಾಡಿದ್ದರು. ಬಿಎಸ್ ವೈ ಅವರ ಈ ನಡೆಯನ್ನು ತೀವ್ರವಾಗಿ ವ್ಯಂಗ್ಯ ಮಾಡಿರುವ ಕಾಂಗ್ರೆಸ್ ಯಡಿಯೂರಪ್ಪ ಅವರ ಅಸಮರ್ಥತೆ ಬಹಿರಂಗವಾಗಿದೆ ಎಂದು ಹೇಳಿದೆ.
ಈ ಬಗ್ಗೆ ಕಾರ್ಟೂನ್ ವಿಡಿಯೋವೊಂದನ್ನು ಕರ್ನಾಟಕ ಕಾಂಗ್ರೆಸ್ ಟ್ವಿಟರ್ ಖಾತೆ ಅಪ್ಲೋಡ್ ಮಾಡಿದ್ದು, ಬಿಎಸ್ ವೈ ಬ್ರೇಕಿಂಗ್ ನ್ಯೂಸ್ ಎಂಬ ಬಾಂಬ್ ಅನ್ನು ಸ್ಫೋಟಿಸುವ ಪ್ರಯತ್ನ ಮಾಡುವುದನ್ನು ವಿಡಿಯೋದಲ್ಲಿ ಚಿತ್ರೀಕರಿಸಲಾಗಿದೆ. ಅಲ್ಲದೆ 'ವಚನ ಭ್ರಷ್ಟ ಯಡಿಯೂರಪ್ಪ, ಅವರು ಹೇಳಿರುವ ಮಾತನ್ನೇ ಸರಿಯಾದ ಸಮಯಕ್ಕೆ ನಡೆಸಿಕೊಡಲಾಗದವರು ಜನರ ಮಾತು ಹಾಗೂ ನಿರೀಕ್ಷೆಗಳನ್ನು ಹೇಗೆ ನಡೆಸಿಕೊಂಡಾರು' ಎಂದು ಟ್ವೀಟ್ ಮಾಡಿದೆ.
ಇನ್ನು ಕಾಂಗ್ರೆಸ್ ಪಕ್ಷ ಮಾಡಿರುವ ಈ ಟ್ವೀಟ್ ಗೆ ಟ್ವೀಟಿಗರು ಸಹ ಕಿಡಿಕಾರಿದ್ದು, ಬಿಎಸ್ ವೈ ಬ್ರೇಕಿಂಗ್ ಅನ್ನು 'ಫೇಕ್ ಬ್ರೇಕಿಂಗ್' ಎಂದು ಕರೆದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com