ಈ ಬಗ್ಗೆ ಕಾರ್ಟೂನ್ ವಿಡಿಯೋವೊಂದನ್ನು ಕರ್ನಾಟಕ ಕಾಂಗ್ರೆಸ್ ಟ್ವಿಟರ್ ಖಾತೆ ಅಪ್ಲೋಡ್ ಮಾಡಿದ್ದು, ಬಿಎಸ್ ವೈ ಬ್ರೇಕಿಂಗ್ ನ್ಯೂಸ್ ಎಂಬ ಬಾಂಬ್ ಅನ್ನು ಸ್ಫೋಟಿಸುವ ಪ್ರಯತ್ನ ಮಾಡುವುದನ್ನು ವಿಡಿಯೋದಲ್ಲಿ ಚಿತ್ರೀಕರಿಸಲಾಗಿದೆ. ಅಲ್ಲದೆ 'ವಚನ ಭ್ರಷ್ಟ ಯಡಿಯೂರಪ್ಪ, ಅವರು ಹೇಳಿರುವ ಮಾತನ್ನೇ ಸರಿಯಾದ ಸಮಯಕ್ಕೆ ನಡೆಸಿಕೊಡಲಾಗದವರು ಜನರ ಮಾತು ಹಾಗೂ ನಿರೀಕ್ಷೆಗಳನ್ನು ಹೇಗೆ ನಡೆಸಿಕೊಂಡಾರು' ಎಂದು ಟ್ವೀಟ್ ಮಾಡಿದೆ.