ಈ ಬಗ್ಗೆ ದೈನಿಕವೊಂದು ವರದಿ ಮಾಡಿದ್ದು, ರಾಜ್ಯ ವಿಧಾನಸಭೆಯಿಂದ ಇದೇ ಮಾರ್ಚ್ 23 ರಂದು ರಾಜ್ಯಸಭೆಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಆಯೋಗ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎನ್ನಲಾಗಿದೆ. ಶಾಸಕರ ಕುದುರೆ ವ್ಯಾಪಾರ ತಡೆಯುವ ನಿಟ್ಟಿನಲ್ಲಿ ಶಾಸಕರ ಚಲನ-ವಲನದ ಮೇಲೆ ಆದಾಯ ತೆರಿಗೆ ಇಲಾಖೆ, ಚುನಾವಣಾ ಆಯೋಗ, ಕೇಂದ್ರ ಹಾಗೂ ರಾಜ್ಯ ಗುಪ್ತಚರ ಇಲಾಖೆಗಳು ಹದ್ದಿನ ಕಣ್ಣಿಟ್ಟಿವೆ ಎನ್ನಲಾಗಿದೆ.