ನನ್ನ ಅಜ್ಜಿಯ ಕಷ್ಟದ ದಿನಗಳಲ್ಲಿ ನೀವು ಸಹಾಯ ಮಾಡಿದ್ದೀರಿ. ರಾಜಕೀಯ ವಿರೋಧಿಗಳು ಅವರನ್ನು ಸೋಲಿಸಲು ಪ್ರಯತ್ನಿಸಿದಾಗ ಅವರ ಜೊತೆ ನೀವು ನಿಂತು ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ್ದೀರಿ. ಅಂತಹ ಸ್ಥಳಕ್ಕೆ ನಾನಿಂದು ಬಂದಿದ್ದೇನೆ, ಚಿಕ್ಕಮಗಳೂರಿಗೆ ಬಂದಿರುವುದು ನನಗೆ ಅತೀವ ಸಂತೋಷ ನೀಡಿದೆ, ನೀವು ಮಾಡಿರುವ ಉಪಕಾರವನ್ನು ಎಂದೆಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಸ್ಮರಿಸಿಕೊಂಡರು.