ವಿಧಾನಸಭೆ ಚುನಾವಣೆಯಲ್ಲಿ ಯಾದವ ಸಮುದಾಯದ ಮೂವರಿಗೆ ಬಿಜೆಪಿ ಟಿಕೆಟ್: ಬಿಎಸ್ ವೈ ಭರವಸೆ

ರಾಜ್ಯದಲ್ಲಿ 35 ಲಕ್ಷ ಜನಸಂಖ್ಯೆ ಹೊಂದಿರುವ ಗೊಲ್ಲ(ಯಾದವ) ಸಮುದಾಯದ ಮೂವರಿಗೆ ಬಿಜೆಪಿ ಟಿಕೆಟ್....
ಯಾದವ್ ಸಮಾವೇಶದಲ್ಲಿ ಬಿಎಸ್ ಯಡಿಯೂರಪ್ಪಗೆ ಸನ್ಮಾನ
ಯಾದವ್ ಸಮಾವೇಶದಲ್ಲಿ ಬಿಎಸ್ ಯಡಿಯೂರಪ್ಪಗೆ ಸನ್ಮಾನ
Updated on
ತುಮಕೂರು: ರಾಜ್ಯದಲ್ಲಿ 35 ಲಕ್ಷ ಜನಸಂಖ್ಯೆ ಹೊಂದಿರುವ ಗೊಲ್ಲ(ಯಾದವ) ಸಮುದಾಯದ ಮೂವರಿಗೆ ಬಿಜೆಪಿ ಟಿಕೆಟ್ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಶುಕ್ರವಾರ ಭರವಸೆ ನೀಡಿದ್ದಾರೆ.
ಇಂದು ತುಮಕೂರಿನಲ್ಲಿ ರಾಜ್ಯ ಮಟ್ಟದ ಯಾದವ ಸಮಾವೇಶ ಉದ್ದೇಶಿಸಿ ಮಾತನಾಡಿದ ಬಿಎಸ್ ವೈ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ತುಮಕೂರು ಮತ್ತು ಬೆಳಗಾವಿಯಲ್ಲಿ ಯಾದವ ಜನಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಯಾವದ ಜನತೆ ಒಟ್ಟಾಗಿ ಬಿಜೆಪಿಯನ್ನು ಬಲಪಡಿಸಬೇಕು ಎಂದು ಕರೆ ನೀಡಿದರು.
ನಿಮ್ಮ ಸಮುದಾಯದ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವುದರ ಜತೆಗೆ ಇತರೆ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕೃಷ್ಣ ಯಾದವಾನಂದ ಮಠಕ್ಕೆ 1 ಕೋಟಿ ರುಪಾಯಿ ನೀಡುವುದಾಗಿ ಹಾಗೂ ಯಾದವ ಸಮುದಾಯವನ್ನು ಎಸ್ಸಿ/ಎಸ್ಟಿಗೆ ಸೇರಿಸುವುದಾಗಿ  ಮಾಜಿ ಸಿಎಂ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com