ಬೆಂಗಳೂರು: ಜೆಡಿಎಸ್ ನಾಯಕತ್ವದ ವಿರುದ್ಧ ಸಿಡಿದೆದ್ದಿರುವ ಏಳು ಜನ ಬಂಡಾಯ ಶಾಸಕರ ಪೈಕಿ ನಾಲ್ಕು ಶಾಸಕರು ಸ್ಪೀಕರ್ ಕೆ.ಬಿ. ಕೋಳಿವಾಡ ಅವರನ್ನು ಭೇಟಿ ಮಾಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಶಾಸಕರಾದ ಚಲುವರಾಯಸ್ವಾಮಿ, ಭೀಮಾನಾಯ್ಕ್, ಜಮೀರ್ಅಹಮದ್ಖಾನ್ಮತ್ತು ಅಖಂಡ ಶ್ರೀನಿವಾಸಮೂರ್ತಿ ಸ್ಪೀಕರ್ ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಎಚ್.ಸಿ. ಬಾಲಕೃಷ್ಣ ಮತ್ತು ಇಕ್ಬಾಲ್ಅನ್ಸಾರಿ ಅವರು ಇಂದು ಮಧ್ಯಾಹ್ನ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.
ರಮೇಶ್ ಬಂಡೀಸಿದ್ದೇಗೌಡ ಅವರು ಶುಕ್ರವಾರ ಸಂಜೆಯೇ ಸ್ಪೀಕರ್ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದರು. ನಾಲ್ಕು ಶಾಸಕರು ರಾಜೀನಾಮೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸ್ಪೀಕರ್, ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ತಿಳಿಸಿದರು. ರಮೇಶ್ ಬಂಡೀಸಿದ್ದೇಗೌಡ ಅವರ ರಾಜೀನಾಮೆ ಸಹ ಅಂಗೀಕಾರವಾಗಿದೆ ಎಂದು ತಿಳಿಸಿದರು.