ಕಾಂಗ್ರೆಸ್ ಜೊತೆಗಿನ ಮೈತ್ರಿ ಕೇವಲ ವ್ಯಂಗಕ್ಕಾಗಿ ಹೇಳಿದ್ದು, ಕರ್ನಾಟಕ ಸಂಘಟನೆ ಇಂದು ದೇವೇಗೌಡರನ್ನು ಭೇಟಿ ಮಾಡಿ ಬಿಜೆಪಿ ಸೋಲಿಸಲು ಜೆಡಿಎಸ್, ಕಾಂಗ್ರೆಸ್ ಒಂದಾಗಬೇಕೆಂದು ಮನವಿ ಸಲ್ಲಿಸಿದರು. ಮನವಿಗೆ ಪ್ರತಿಕ್ರಿಯಿಸಿದ ದೇವೇಗೌಡರು ಕಾಂಗ್ರೆಸ್ ದೊಡ್ಡ ಪಕ್ಷ, ಅವರೇ ಮೊದಲು ಪಟ್ಟಿ ಕಳುಹಿಸಲು, ಮೈತ್ರಿ ಪ್ರಸ್ತಾವನೆ ಬಂದರೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಸಮಾಜವಾದಿ ಪಕ್ಷ ಸೀಟು ಕೇಳಿದರೆ ಅವರಿಗೂ ಕೆಲವು ಸೀಟು ಬಿಟ್ಟುಕೊಡಲು ಸಿದ್ಧ. ನೀವೆಲ್ಲರೂ ಸದುದ್ದೇಶದಿಂದ ಇಲ್ಲಿಗೆ ಬಂದಿದ್ದೀರಿ, ಹೀಗಾಗಿ ನಿಮ್ಮ ಮನವಿಯನ್ನು ಪರಿಶೀಲಿಸುತ್ತೇನೆ ಎಂದು ದೇವೇಗೌಡರು ತಿಳಿಸಿದ್ದಾರೆ.