ಬಿಜೆಪಿ ಸೇರ್ತೀನಿ ಅಂದ ಮಾಲೀಕಯ್ಯರನ್ನು ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್!

ಹೈದರಾಬಾದ್‌ ಕರ್ನಾಟಕದ ಪ್ರಭಾವಿ ನಾಯಕ, ಅಫಜಲಪುರ ಕ್ಷೇತ್ರದ ಶಾಸಕರಾದ ಮಾಲೀಕಯ್ಯ ಗುತ್ತೇದಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ...
ಮಾಲೀಕಯ್ಯ ಗುತ್ತೇದಾರ್
ಮಾಲೀಕಯ್ಯ ಗುತ್ತೇದಾರ್
Updated on
ಬೆಂಗಳೂರು: ಹೈದರಾಬಾದ್‌ ಕರ್ನಾಟಕದ ಪ್ರಭಾವಿ ನಾಯಕ, ಅಫಜಲಪುರ ಕ್ಷೇತ್ರದ ಶಾಸಕರಾದ ಮಾಲೀಕಯ್ಯ ಗುತ್ತೇದಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. 
ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗುವುದಾಗಿ ಬಹಿರಂಗವಾಗಿ ಹೇಳಿದ್ದು ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷ ಕಾಲ ಅವರನ್ನು ಉಚ್ಛಾಟಿಸಿ ಆದೇಶ ಹೊರಡಿಸಿದ್ದಾರೆ. 
ಈಡಿಗ ಸಮುದಾಯಕ್ಕೆ ಸೇರಿರುವ ಗುತ್ತೇದಾರ್ ಹೈದರಾಬಾದ್ ಕರ್ನಾಟಕ ಬಾಗದಲ್ಲಿ ತನ್ನದೇ ಬೆಂಬಲಿಗರನ್ನು ಹೊಂದಿದ್ದಾರೆ. ಇವರು ಅಫಜಲಪುರ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com