ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದೇ ನಮ್ಮ ಮುಖ್ಯ ಗುರಿ ಎಂದು ಜೆಡಿಯು ಮುಖಂಡ ಶರದ್ ಯಾದವ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಂದಿನ ಲೋಕಸಭೆ ಚುನಾವಣೆಗೆ ರಾಜ್ಯ ವಿಧಾನಸಭೆ ಚುನಾವಣೆ ಸೆಮಿಫೈನಲ್ ಇದ್ದಂತೆ, ಇಲ್ಲಿ ಬಿಜೆಪಿ ಸೋಲಿಸುವುದೇ ನಮ್ಮ ಗುರಿ' ಎಂದು ತಿಳಿಸಿದ್ದಾರೆ.
'ಕರ್ನಾಟಕದ ಚುನಾವಣೆಯನ್ನು ಇಡೀ ದೇಶದ ಜನ ನೋಡುತ್ತಿದ್ದಾರೆ. ದೇಶದಲ್ಲಿ ಬಿಜೆಪಿಯನ್ನು ಹೊಡೆದೋಡಿಸಬೇಕು. ಬಿಜೆಪಿ ಮುಕ್ತ ಭಾರತ ಮಾಡಬೇಕು. ಅದಕ್ಕಾಗಿಯೇ ರಾಜ್ಯಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ. .
'ಕಾಂಗ್ರೆಸ್ ಬೆಂಬಲಿಸಬೇಕೋ, ಜೆಡಿಎಸ್ ಬೆಂಬಲಿಸಬೇಕೊ ಎಂಬುದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಎರಡು ದಿನ ಇಲ್ಲೇ ಇರುತ್ತೇನೆ. ಪಕ್ಷದ ಕಾರ್ಯಕರ್ತರ ಜತೆ ಚರ್ಚಿಸಿ ಮಾಧ್ಯಮಗಳಿಗೆ ತಿಳಿಸುತ್ತೇನೆ ಎಂದು ವಿವರಿಸಿದ್ದಾರೆ.
ಈ ಹಿಂದೆ ಕರ್ನಾಟಕದಲ್ಲಿ ಪಕ್ಷ ಪ್ರಬಲವಾಗಿರಲಿಲ್ಲ, ರಾಜ್ಯದ ಎಲ್ಲಾ ಭಾಗಗಳ ಜನರ ಬೆಂಬಲದಿಂದಾಗಿ ಜೆಡಿಯು ಬಿಜೆಪಿ ಸೋಲಿಸಲು ಹೋರಾಟ ನಡೆಸುತ್ತದೆ ಎಂದು ತಿಳಿಸಿದ್ದಾರೆ.