2013 ರಲ್ಲಿ ಟಿ,ಎನ್ ಜವರಾಯಿಗೌಡರ ವಿರುದ್ಧ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಬಿಜೆಪಿಯ ಕೃಷ್ಣಪ್ಪ ಕೇವಲ12 ಸಾವಿ ಮತಗಳನ್ನು ಪಡೆದಿದ್ದರು. ನಗರದಲ್ಲಿ ಯಾವುದೇ ಹೊಸ ಯೋಜನೆಗಳು ಪ್ರಾರಂಭವಾಗುವಾಗ ಸೋಮಶೇಖರ್ ಮುಂಚೂಣಿಯಲ್ಲಿರುತ್ತಿದ್ದರು. ಯಾವುದೇ ಅಭ್ಯರ್ಥಿಯನ್ನು ಅವರು ಸುಲಭವಾಗಿ ಪರಿಗಣಿಸುವುದಿಲ್ಲ. ಇನ್ನೂ ನಟ ಜಗ್ಗೇಶ್ ಅವರ ಯಾವುದೇ ಕಾರ್ಯಕ್ರಮಗಳನ್ನು ಪ್ರಸಾ ಮಾಡದಂತೆ ಚುನಾವಣಾ ಆಯೋಗ ನಿಷೇಧ ಹೇರಿದೆ.