ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕುರಿತಂತೆ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಂಜಾನ್ ಮಾಸದ ಕೊನೆಯ ಉಪವಾಸವನ್ನು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಆಯೋಜನೆ ಮಾಡಲಾಗಿತ್ತು. ಮಠದಲ್ಲಿ ಇಫ್ತಾರ್ ಕೂಟವನ್ನೇಕೆ ಆಯೋಜನೆ ಮಾಡಲಾಗಿತ್ತು. ಮುಸ್ಲಿಮರ ಮಸೀದಿಯಲ್ಲಿಯಲ್ಲಿ ಗಣೇಶ ಮೂರ್ತಿಗೆ ಪೂಜೆ ಮಾಡುತ್ತಾರೆಯೇ?... ಅಲ್ಪಸಂಖ್ಯಾತರ ಮನವೊಲಿಸಲು ಕಾಂಗ್ರೆಸ್ ಯತ್ನ ನಡೆಸುತ್ತಿರುತ್ತದೆ ಎಂದು ಪದೇ ಪದೇ ಬಿಜೆಪಿ ಆರೋಪ ಮಾಡುತ್ತದೆ. ಇದೇ ತಂತ್ರವನ್ನು ಇದೀಗ ಬಿಜೆಪಿ ಕೂಡ ಅನುಸರಿಸುತ್ತಿದೆ. ಹಿಂದುತ್ವ ರಕ್ಷಕ ಎಂಬ ಹೆಸರು ಪಡೆದಿರುವ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಹೇಳಿದ್ದಾರೆ.