‘ರಾಜಣ್ಣ ಎಂಬುವರು ಎಂ.ವಿ. ಬಡಾವಣೆಯ ಟೌನ್ ಕೋ–ಆಪರೇಟಿವ್ ಬ್ಯಾಂಕಿನಿಂದ ಹಣ ಪಡೆದು, ಅದನ್ನು ನಿಸರ್ಗ ನಾರಾಯಣಸ್ವಾಮಿ ಅವರಿಗೆ ಕೊಡುವಂತೆ ಹೇಳಿದ್ದರು ಎಂದು ಹರೀಶ್ ತಿಳಿಸಿದ್ದಾರೆ’ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನು ಮತದಾರರಿಗೆ ಹಂಚಲು ತಂದಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ.