ಮೇ.12 ರಂದು ನಿಮ್ಮ ಆಯ್ಕೆ, ನಿಮ್ಮ ನಿರ್ಧಾರ ಭ್ರಷ್ಟಾಚಾರಿಗಳಿಗೆ ಶಿಕ್ಷೆ ಕೊಡುವ ನನ್ನ ನಿರ್ಧಾರಕ್ಕೆ ಶಕ್ತಿ ನೀಡಲಿದೆ. ನೋಟು ನಿಷೇಧ ನಿರ್ಧಾರ ನಂತರ ಸಿಕ್ಕಿ ಹಾಕಿಕೊಂಡ ಹಣ ಹೆಸರಾಂತ ವ್ಯಕ್ತಿಗಳದ್ದೇ ಆಗಿತ್ತೇ ವಿನಃ ಕಾರ್ಮಿಕರದ್ದಲ್ಲ. ನಾನು ಗುಜರಾತ್ ರಾಜ್ಯದಲ್ಲಿದ್ದಾಗ ಕರ್ನಾಟಕದ ಬಗ್ಗೆ ಕೇಳಿದಾಗ ಹೆಮ್ಮೆಯಾಗುತ್ತಿತ್ತು. ಆದರೆ, ಕಳೆದ 5 ವರ್ಷದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿರುವುದು ನೋಡಿದರೆ ಬೇಸರವಾಗುತ್ತದೆ, ಸಿಟ್ಟು ಬರುತ್ತದೆ. ಇಲ್ಲಿ ಮಹಿಳೆಯರು, ಮಕ್ಕಳು ಸುರಕ್ಷಿತರಲ್ಲ. ಇಲ್ಲಿ ಲೋಕಾಯುಕ್ತ ಕೂಡ ಸುರಕ್ಷಿತವಾಗಿಲ್ಲ ಎಂಬುದು ಸಾಬೀತಾಗಿದೆ.