ಅಂತೆಯೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ತಮ್ಮ ಮತ್ತು ಮಾಜಿ ಶಾಸಕ ಜಮೀರ್ ಅಹ್ಮದ್ ಅವರ ಪಾಕಿಸ್ತಾನ ಪ್ರವಾಸದ ಕುರಿತ ಸುಳ್ಳುಸುದ್ದಿಯನ್ನು ಪರೋಕ್ಷವಾಗಿ ಉಲ್ಲೇಖ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೆಲವು ಬೃಹಸ್ಪತಿಗಳು ಕರ್ನಾಟಕ ಚುನಾವಣೆಗೆ ಪಾಕಿಸ್ತಾನದ ಸಂಬಂಧ ನೀಡುತ್ತಿದ್ದಾರೆ. ನಾನು ಯಾವುದೇ ದೇಶಕ್ಕೂ ಹೋಗಿಲ್ಲ. ಕಳೆದ ಎರಡು ವರ್ಷಗಳಲ್ಲಿ ನಾನು ಕೇವಲ 2 ದೇಶಗಳಿಗೆ ಭೇಟಿ ನೀಡಿದ್ದು, ನನ್ನ ಮಗ ರಾಕೇಶ್ ನ ಪಾರ್ಥೀವ ಶರೀರ ಭಾರತಕ್ಕೆ ವಾಪಸ್ ತರಲು ಮತ್ತು ಅನಿವಾಸಿ ಕನ್ನಡಿಗರ ಅಸೋಸಿಯೇಷನ್ ಉದ್ಘಾಟನೆ ಮಾಡಲು ದುಬೈಗೆ ತೆರಳಿದ್ದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.