ಜೆಡಿಎಸ್ ಪಕ್ಷಕ್ಕೆ ಜನರು ಮತ ಹಾಕಿದ್ದೇ ಆದರೆ, ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರೈತರ ಸಾಲಗಳನ್ನು ಮನ್ನಾ ಮಾಡಲಾಗುತ್ತದೆ. ನೀರು ಸಮಸ್ಯೆ ಸೇರಿದಂದೆ ಇನ್ನಿತರೆ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ. ರಾಜ್ಯದಲ್ಲಿ ಬೆಳೆದ ಮಾವುಗಳನ್ನು ಇತರೆ ರಾಷ್ಟ್ರಗಳಿಗೆ ರಫ್ತು ಮಾಡಲು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ರೈತರ ಪ್ರತೀ ಕಣ್ಣೀರಿನ ಹನಿಯ ಬೆಲೆಯನ್ನು ಸಿದ್ದರಾಮಯ್ಯ ಸರ್ಕಾರಕ್ಕೆ ವಿವರಿಸಲಾಗುತ್ತದೆ. 5 ವರ್ಷಗಳ ಅಧಿಕಾರದಲ್ಲಿ ರಾಜ್ಯಕ್ಕೆ ಏನನ್ನೂ ಮಾಡದೆ, ವಿರೋಧ ಪಕ್ಷಗಳನ್ನು ಟೀಕಿಸಿದ್ದ ಸಿದ್ದರಾಮಯ್ಯ ಅವರಿಗೆ ತಕ್ಕ ಪಾಠವನ್ನು ಹೇಳಿಕೊಡಲಾಗುತ್ತದೆ ಎಂದಿದ್ದಾರೆ.