'ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನನಗೆ ಗೌರವವಿದೆ. ಆದರೆ ಅವರೂ ಕೂಡ ಮೌಢ್ಯತೆಗೆ ಅಂಟಿಕೊಂಡಿರುವುದು ನಾಚಿಕೆಗೇಡಿನ ವಿಚಾರವಾಗಿದೆ. ತಮ್ಮದೇ ಪಕ್ಷದ ನಾಯಕರ ಮಾತಿಗೆ ಬೆಲೆ ನೀಡಿ ಪ್ರಧಾನಿ ನರೇಂದ್ರ ಮೋದಿ ನಗರಕ್ಕೆ ಭೇಟಿ ನೀಡಿಲ್ಲ. ಪ್ರಧಾನಿ ಮೋದಿ ಸ್ಥಳೀಯರಲ್ಲ. ಹೀಗಾಗಿ ಅವರದೇ ಪಕ್ಷದ ನಾಯಕರು ಅವರಿಗೆ ಈ ಬಗ್ಗೆ ಮಾಹಿತಿ ನೀಡಿ ಅವರು ಜಿಲ್ಲಾಕೇಂದ್ರಕ್ಕೆ ಭೇಟಿ ನೀಡದಂತೆ ಮಾಡಿದ್ದಾರೆ, ಅವರ ಮಾತಿಗೆ ಬೆಲೆ ನೀಡಿ ಪ್ರಧಾನಿ ಮೋದಿ ಚಾಮರಾಜನಗರಕ್ಕೆ ಬಂದಿಲ್ಲ. ಇದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನರಿಗೆ ಮಾಡಿರುವ ಅಪಮಾನವಾಗಿದ್ದು, ಕೂಡಲೇ ನರೇಂದ್ರ ಮೋದಿ, ರಾಜ್ಯದ ಮತ್ತು ದೇಶದ ಜನರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.