ಹುಬ್ಬಳ್ಳಿ: ಹುಬ್ಳಳ್ಳಿ ವಿಮಾನ ನಿಲ್ದಾಣದಲ್ಲಿ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರಿಗೆ ಕಿರುಕುಳ ನೀಡಿ ಅವಮಾನ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಯಾದಗಿರಿ ಜಿಲ್ಲಾಧಿಕಾರಿ ಉದ್ದೇಶಪೂರ್ವಕವಾಗಿ ಅವರ ಹೆಲಿಕಾಪ್ಟರ್ ಕೆಳಗಿಳಿಯಲು ಅನುಮತಿ ನೀಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಿಜೆಪಿ ವಿರುದ್ಧ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿದ್ದ ಬೆನ್ನಲ್ಲೇ ಬಿಜೆಪಿ ದೂರು ನೀಡಿದೆ.
ಬಿಜೆಪಿ ನಾಯಕರುಗಳಾದ ಪ್ರಧಾನಿ ನರೇಂದ್ರ, ಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಯಡಿಯೂರಪ್ಪ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಆಯೋಗಕ್ಕೆ ದೂರು ಸಲ್ಲಿಸಿದ್ದರು.