ಇದೇ ವೇಳೆ ಕರ್ನಾಟಕದಲ್ಲಿ ತಮ್ಮ ಸರ್ಕಾರದ ಮಾಡಿರುವ ಅಭಿವೃದ್ಧಿ ಯೋಜನೆಗಳನ್ನು ಸಿದ್ದರಾಮಯ್ಯ ಅವರು ವಿವರಿಸಿದ್ದಾರೆ. ಶಿಕಾರಿಪುರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ, ರೈತರ ಕಲ್ಯಾಣಕ್ಕಾಗಿ ರೂ1,800 ಕೋಟಿ ಬಿಡುಗಡೆ ಮಾಡಿದ್ದೆ. ಯಡಿಯೂರಪ್ಪ ರೈತ ವಿರೋಧಿ. ನೀಡಿದ್ದ ಯಾವೊಂದೂ ಭರವಸೆಯನ್ನೂ ಇಡೇರಿಸಿಲ್ಲ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಅಭಿವೃದ್ಧಿಗಾಗಿ ಬಿಡುಗಡೆ ಮಾಡಿದ್ದ ಹಣವನ್ನು ಯಡಿಯೂರಪ್ಪ ಅವರು, ಬಿಜೆಪಿ ಅಧಿಕಾರಾವಧಿಯಲ್ಲಿ, ಸಾಗರದಲ್ಲಿರುವ ತಾವು ನಿರ್ಮಿಸುತ್ತಿದ್ದ ಕಾಲೇಜು ನವೀಕರಣಕ್ಕೆ ಬಳಸಿಕೊಂಡಿದ್ದಾರೆಂದು ಆರೋಪಿಸಿದ್ದಾರೆ.