ಸಿದ್ದರಾಮಯ್ಯ
ರಾಜಕೀಯ
ಅನಂತಕುಮಾರ್ ಹೆಗಡೆ ನಾಲಾಯಕ್, ಪಂಚಾಯ್ತಿ ಸದಸ್ಯನಾಗಲೂ ಯೋಗ್ಯರಲ್ಲ: ಸಿದ್ದರಾಮಯ್ಯ
ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಒಬ್ಬ 'ನಾಲಾಯಕ್'ನನ್ನು ಕೇಂದ್ರ ಮಂತ್ರಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಅನಂತಕುಮಾರ್ ಹೆಗಡೆ ಕೇಂದ್ರ ಮಂತ್ರಿ ಅಲ್ಲ. ಗ್ರಾಮ ಪಂಚಾಯತ್ ಸದಸ್ಯನಾಗಲು ಯೋಗ್ಯನಲ್ಲ ಎಂದು ತಿರುಗೇಟು ನೀಡಿದರು.
ಬಿಜೆಪಿಗೆ ಸಾಮಾಜಿಕ ನ್ಯಾಯದ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಸಂವಿಧಾನ ಬದಲಾಯಿಸುವ ಮಾತನಾಡುತ್ತಿದ್ದಾರೆ. ಒಂದು ವೇಳೆ ಪ್ರಧಾನಿ ಮೋದಿ ಸಂವಿಧಾನ ಬದಲಿಸುವ ಯತ್ನ ಮಾಡಿದರೆ ಕಾಂಗ್ರೆಸ್ ದೇಶಾದ್ಯಂತ ಉಗ್ರ ಪ್ರತಿಭಟನೆ ಮಾಡಲಿದೆ ಎಂದರು.
ಕಳೆದ ಏಪ್ರಿಲ್ ನಲ್ಲಿ ಕಾಂಗ್ರೆಸ್ ನಾಟಕ ಕಂಪನಿ ಕಳೆದ 70 ವರ್ಷಗಳಿಂದ ದೇಶದಲ್ಲಿ ಆಡಳಿತ ನಡೆಸಿದ ಎಂದು ಅನಂತಕುಮಾರ್ ಹೆಗಡೆ ಟೀಕಿಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ